October 16, 2007

ಯಾದ್ ವಶೇಮ್ - ೧

  • ಹಗಲು ಬಾಡುವ ಹೊತ್ತು ಇರುಳು ಮೆಲ್ಲನೆ ಕಣ್ತೆರೆದಿತ್ತು. ಸೂರ್ಯ ಮುಳುಗಿತ್ತಿದ್ದ ಸಮುದ್ರದಾಳಕ್ಕೆ ಇಳಿಯುತ್ತಿದ್ದ. ಇಳಿವ ಸೂರ್ಯನ ಕೆಂಪು ಬೆಳಕಿನಲ್ಲಿ ನಮ್ಮ ಬದುಕಿನ ಸಂಜೆಯಲ್ಲಿ ನೆನಪುಗಳ ಬುತ್ತಿ ಬಿಚ್ಚಿಕೊಂಡಿತು.

  • ಈ ಹುಡುಗಿ ನನ್ನ ಬದುಕಿಗೆ ಬಂದು ಅದೆಷ್ಟು ವರ್ಷಗಳಾದವು. ದಶಕಗಳೇ ಕಳೆದು ಹೋದವು. ಆದರೂ ಕೆಲವೊಮ್ಮೆ ಅನಿತಾ ಅಪ್ಪಟ ಅಪರಿಚಿತಳಂತೆ ಕಂಡುಬಿಡುತ್ತಾಳೆ - ವಿವೇಕ್

  • ಯುದ್ದ ಮುಗಿದಿತ್ತು ಯುರೋಪಿನಲ್ಲಿ. ನನ್ನೆದೆಯ ಕದನಕ್ಕೆ ಕೊನೆ ಎಲ್ಲಿತ್ತು? ಎಲ್ಲಿ ಅಮ್ಮ ಅಕ್ಕ ತಮ್ಮ? ಎಲ್ಲವರು? ಬದುಕುಳಿದರೆ, ಬಲಿಯಾದರೆ, ಹೇಳಲು ಯಾರಿದ್ದರು? ಇಲ್ಲಿ ಒಡೆಯಬಹುದೆ ನನ್ನ ಇತಿಹಾಸದ ಒಡವುಗಳೆಲ್ಲ. ಮರಳಿ ಎದುರಾಗಬಹುದೆ, ಹೊರಳಿ ಬರಬಹುದೆ ನನ್ನವರು ಚರಿತ್ರೆಯ ಆಳದಿಂದೆದ್ದು?

  • ಎಷ್ಟೊಂದು ಬದುಕು ಹಿಂದಿದೆ. ಒಂದಿಷ್ಟೇ ಬದುಕು ಮುಂದೆ. ಕಳೆದ ಬದುಕಿನ ತುಂಬಾ ಹುಡುಕಾಟವಿದೆ- ಹೊರಗೆ ಹುಡುಕಿದ್ದು, ನನ್ನೊಳಗೆ ಹುಡುಕಿದ್ದು, ಎದೆಯಕದಗಳನ್ನೆಲ್ಲ ತಟ್ಟಿ ತಡಕಿದ್ದು, ಯಾರು ನಾವು? ಎಲ್ಲಿಂದ ಬಂದೆವು?

  • ಕಳೆದುಕೊಳ್ಳಬಹುದಾದ ಎಲ್ಲವನ್ನೂ ಕಳೆದುಕೊಂಡ ಮೇಲೆ ಇನ್ನು ಕಳೆದುಕೊಳ್ಳುವ ಭಯವೆ ಇಲ್ಲದ ನಿರ್ಲಿಪ್ತತೆ ಆ ಬಿರಿದ ಕಣ್ಣುಗಳಲ್ಲಿ.

  • ಗೋರಿಗಳ ಎದುರಲ್ಲಿ ಸತ್ತವರ ನಡುವೆ ಅಗಲಿದ ಆತ್ಮಗಳ ಇರುವಲ್ಲಿ ಎರಡು ಎಳೆಯ ಜೀವಗಳ ನಡುವೆ ಒಂದು ನೋವಿನ ಸಂಬಂಧ, ಮೌನದಲ್ಲಿ, ನಿಶ್ಶಬ್ದದಲ್ಲಿ ಏಕಾಂತದಲ್ಲಿ ಆರಂಭವಾಗಿತ್ತು... ಆ ಸಂಬಂಧಕ್ಕೆ ಯೌವನದ ಬುದ್ಬುರಗಳಿರಲಿಲ್ಲ, ಕಿಶೋರದ ಆವೇಗವಿರಲಿಲ್ಲ. ಧುಮುಕುವ ಜಲಪಾತದ ಭೋರ್ಗರೆತವಿರಲಿಲ್ಲ. ಸಮುದ್ರದ ಮೊರೆತವಿರಲಿಲ್ಲ.

  • ಬಹುಶ: ನನಗೆಂದೂ ಸ್ಮಶಾನ, ಗೋರಿಪಾಳ್ಯ ಇವೆಲ್ಲವೂ ಭಯದ ವಿಷಯವಾಗಲೇ ಇಲ್ಲ.

  • ನನ್ನದೊಂದೇ ಪ್ರಶ್ನೆ - ಯುದ್ದ ಯಾವಾಗ ಮುಗಿಯುತ್ತೆ.

  • ಹೊರಗಿನಿಂದ ಬಂದ ಬ್ರಿಟಿಷರನ್ನು ತೊಲಗಿ ಭಾರತದಿಂದ ಎಂದು ಮಾಡಬಹುದು. ನಮ್ಮೊಳಗಿನಿಂದಲೇ ನಮ್ಮ ನಡುವೆಯೇ ಹುಟ್ಟುವ ಹಿಟ್ಲರುಗಳನ್ನು ತೊಲಗಿಸುವುದು ಹೇಗೆ?

  • ಹಣ ಏನು ಯಾರ್ ಬೇಕಾದ್ರು ಸಂಪಾದಿಸ್ತಾರೆ. ಗುಣ ತರಾಕಾಗುತ್ತಾ.. ಅಪ್ಪಟ ಅನಕ್ಷರಸ್ಥ ಅಮ್ಮ ಹೇಳಿದ್ದಳು!

  • ಮತ್ತೆಲ್ಲವನ್ನೂ ಎಲ್ಲರನ್ನೂ ಕಿತ್ತುಕೊಂಡಿದೆ ಬದುಕು ನನ್ನಿಂದ. ಶಾಶ್ವತ ವಿಷಾದದ ಏಕತಾನತೆಯಷ್ಟೇ ಇನ್ನು ಉಳಿದಿರುವುದು.

  • ಯಾರು ಉಳಿದಿರಬಹುದು ನನ್ನ ಇಡೀ ವಂಶದಲ್ಲಿ? ಯಾರು ಉಳಿದಿರಬಹುದು ನನ್ನ ರಕ್ತ ಹಂಚಿಕೊಂಡವರಲ್ಲಿ. ನನ್ನ ಮಕ್ಕಳಿಗೆ, ಮೊಮ್ಮಕ್ಕಳಿಗೆ, ಅತ್ತೆಯಂತೆಯೇ ನಾನೂ ನನ್ನ ವಂಶದ ಕತೆಗಳನ್ನು ಹೇಳಬಲ್ಲೆನೆ? ನನ್ನೊಳಗಿನ ಈ ಕತೆಗಳು ನನ್ನೊಡನೆಯೇ ಮಣ್ಣಾಗುತ್ತವೆಯೇ?

  • ಬರಲಿರುವ ನಾಳೆಗಳಲ್ಲಿ ನಿನ್ನೆಗಳ ಹುಡುಕಿ ಹೋಗುವ ತುಡಿತವಿತ್ತು. ಬಂದ ಹಾದಿಯನ್ನೊಮ್ಮೆ ಹಿಂದೆ ತಿರುಗಿ ನೋಡುವ ತವಕವಿತ್ತು. ಅವೆಲ್ಲವೂ ಸದ್ಯಕ್ಕೆ ಹ್ಯಾನಾಳ ಎದೆಯ ಗೂಡಿನಲ್ಲಿ ಭದ್ರ ಕದ ಬಿಗಿದು ಅಗುಳೆ ಹಾಕಿತ್ತು.

  • ಮರೆಯಬಹುದೆ ತನ್ನವರನ್ನು ಅವರ ಸಾವು ಬದುಕಿನ ಪತ್ತೆ ಇಲ್ಲದ ಭೂತವನ್ನು, ಹಿಂದೆ ಬಿಟ್ಟು ಬಂದ ಬದುಕನ್ನು?

  • ‘ಹಾಂ. ನಡೆದಿತ್ತು ಒಂದೇ ಒಂದು’ ಹಿಟ್ಲರನ ವಿರುದ್ದ ನಡೆದ ಒಂದೇ ಒಂದು ಸಾರ್ವಜನಿಕ ಪ್ರತಿಭಟನೆ - ಮಹಿಳೆಯರದಾಗಿತ್ತು!

  • ನನಗೆ ನಂಬಿಕೆ ಇದೆ ಜನಗಳ ಶಕ್ತಿಯಲ್ಲಿ ಅನ್ಯಾಯದ ವಿರುದ್ದ ದನಿ ಎನ್ನುವ ಜನರ ಸಂಘಟನೆಯಲ್ಲಿ ನಾನೇನೂ ಆಗದಿದ್ದರೂ, ಆ ಗುಂಪಿನಲ್ಲೊಂದು ಸಣ್ಣ ದನಿಯಾಗಲು ಬಯಸುತ್ತೇನೆ.

  • ಹಿಟ್ಲರ್ ನಿಜಕ್ಕೂ ಅಂದು ಸತ್ತನೆ? ಇಲ್ಲ ಇಲ್ಲಿ ಎಲ್ಲೋ ಯಾರದೋ ಮಿದುಳಲ್ಲಿ, ಎದೆಯಲ್ಲಿ ಇನ್ನೂ ಉಸಿರಾಡುತ್ತಿರುವನೆ, ಸಮಯ ಕಾದು ಜಿಗಿದು ಹೊರಬರಲು? ಹಿಟ್ಲರ್ ಎಲ್ಲಿ ಬೇಕಾದರೂ ಹುಟ್ಟಬಹುದು. ಅಮೇರಿಕಾದಲ್ಲೂ ಇಸ್ರೇಲಿನಲ್ಲೂ ಅಹಿಂಸೆಯನ್ನೇ ಬೋಧಿಸಿದ ನಮ್ಮ ಭಾರತದಲ್ಲೂ. ನಮ್ಮೆದ್ಯ ಅಸಹನೆಯಲ್ಲಿ ಹಿಟ್ಲರ್ ಇದ್ದಾನೆ. ನಮ್ಮ ಅಹಂಕಾರದಲ್ಲಿ ಹಿಟ್ಲರ್ ಇದ್ದಾನೆ. ನಮ್ಮ ದುರಭಿಮಾನದಲ್ಲಿ. ಯಾವುದೇ ಕ್ಷಣವನ್ನು ಗಲಭೆಯಾಗಿಸಿ, ರಕ್ತಪಾತವಾಗಿಸಿ ವಿಜ್ರಂಭಿಸಲು ಕಾದ ಹಿಟ್ಲರನಿದ್ದಾನೆ. ಬಹುಶ: ನಮ್ಮೊಳಗೇ ಅವನ ಸಂಹಾರವಾಗಬೇಕಿದೆ ನಮ್ಮೊಳಗೇ....

( ನೇಮಿಚಂದ್ರರವರ ಇತ್ತೀಚೆಗೆ ಬಿಡುಗಡೆಯಾದ ಯಾದ್ ವಶೇಮ್ ಕಾದಂಬರಿಯ ಕೆಲವು ಆಯ್ದ ವಾಕ್ಯಗಳು)

ನನ್ನ ನೆಚ್ಚಿನ ಬರಹಗಾರ್ತಿ ಸಿಕ್ಕಾಗ...

ಕಳೆದ ತಿಂಗಳು ನನಗೆ ನೇಮಿಚಂದ್ರರವರ ಯಾದ್ ವಶೇಮ್ ಪುಸ್ತಕ ಬಿಡುಗಡೆ ಸಮಾರಂಭದ ಆಮಂತ್ರಣ ಬಂದಿತ್ತು. ನನ್ನ ನೆಚ್ಚಿನ ಬರಹಗಾರ್ತಿಯಿಂದ ಆಮಂತ್ರಣ ಬಂದಿದ್ದರಿಂದ ಉಬ್ಬಿಹೋಗಿದ್ದೆ.
ಗಾಂಧಿ ಜಯಂತಿ ದಿನದಂದು ನನ್ನ ಇನ್ನಿಬ್ಬರು ಗೆಳತಿಯರ ಜೊತೆಗೂಡಿ ಕನ್ನಡ ಭವನಕ್ಕೆ ಹೋದೆ.
ನನಗ್ಯಾಕೋ ಅನುಮಾನ ನನ್ನನ್ನು ನಿಜಕ್ಕೂ ನೇಮಿಚಂದ್ರನೇ ಅಮಂತ್ರಿಸಿದ್ದಾ? ಅವರ ಕಾದಂಬರಿ ಬಿಡುಗಡೆ ಇವತ್ತೇನಾ? ಒಂದು ವೇಳೆ ಸಮಾರಂಭ ಇಲ್ಲದಿದ್ದರೆ ನೇಮಿಚಂದ್ರರನ್ನು ಕಣ್ತುಂಬ ನೋಡುವ ಭಾಗ್ಯನೂ ತಪ್ಪುತ್ತೆ. ಮನದಲ್ಲಿ ಹಲವು ಗೊಂದಲ ಕಂಡುಬಂದರೂ ಕನ್ನಡ ಭವನದೊಳಗೆ ಅಡಿ ಇಟ್ಟಾಗ ಮನದಲ್ಲಿ ಸಂತಸ. ಅದು ನಿಜಕ್ಕೂ ನೇಮಿಯವರ ಪುಸ್ತಕ ಬಿಡುಗಡೆ ಸಮಾರಂಭ. ಒಂದಷ್ಟು ರೋಮಂಚನ, ಖುಷಿ, ಪುಳಕ. ವೇದಿಕೆಯಲ್ಲಿ ನೇಮಿ ಜತೆಗೆ ಇತರೆ ಬರಹಗಾರರೂ ಇದ್ರು. ಅವರೆಲ್ಲರ ನಡುವೆ ಚೂಡಿದಾರ ಹಾಕಿ ಮಿಂಚುತ್ತಿದ್ದರು ನೇಮಿಚಂದ್ರ.
ನನಗಂತೂ ತುಂಬಾ ಸಂತಸವಾಗಿತ್ತು. ಕಣ್ ಕಣ್ ಬಿಟ್ಟು ಅವರನ್ನೇ ನೋಡುತ್ತಿದ್ದೆ. ಅದೆಂಥಹ ವಿನಯ. ಅಲ್ಲಿಗೆ ಆಗಮಿಸಿದ ಎಲ್ಲರಲ್ಲೂ ವಿನಯ ದೈನ್ಯತೆಯಿಂದ ವರ್ತಿಸುತ್ತಿದ್ದರು. ಹಿರಿಯ ಬರಹಗಾರರಿಂದ ಕೈ ಮುಗಿದು ಆಶೀರ್ವಾದ ಕೇಳುತ್ತಿದ್ದರು. ನಾನು ಅವರ ಪ್ರತಿ ಚಲನ ವಲನಗಳನ್ನು ನೋಡಿ ಭಾವುಕಳಾಗಿದ್ದೆ. ಸಭೆಯಲ್ಲಿ ಅವರು ಕಾದಂಬರಿ ಕುರಿತಾಗಿ ಮಾತನಾಡಿದ್ದರು. ಇವರ ಬರಹ ಮಾತ್ರವಲ್ಲ. ಮಾತುಗಳೂ ಕೇಳಲು ತುಂಬಾ ಹಿತಕರವಾಗಿದ್ದವು. ಅವರು ಅವರಮ್ಮನ ಬಗ್ಗೆ ಅಭಿಮಾನದಿಂದ ಹೇಳುವಾಗ ನನಗರಿವಿಲ್ಲದಂತೆ ಕಣ್ಣಲ್ಲಿ ನೀರು ಇಳಿದಿದ್ದು.
ನನ್ನ ಮಮ್ಮಿನೂ ಅವರಮ್ಮನಂತೆ ಗ್ರೇಟ್. ನಾನು ಬಯಸಿದ ಬಯಸದ ಎಲ್ಲವನ್ನೂ ನಮಗೆ ನೀಡಿ ಪ್ರೋತ್ಸಾಹಿಸಿದರು.
ಕಾರ್ಯಕ್ರಮ ಮುಕ್ತಾಯವಾದೊಡನೆ ಗೆಳತಿಯರನ್ನು ಬಿಟ್ಟು ನಾನೊಬ್ಬಳೇ ನೇಮಿಚಂದ್ರರಲ್ಲಿಗೆ ಹೋಗಿ ನನ್ನ ಹೆಸರು ವೀಣಾ ಡಿ’ಸೋಜಾ ಎಂದೆ. ಅವರು ಅಷ್ಟೇ ಹರ್ಷದಲ್ಲಿ ‘ಓ ವೀಣಾ... ಇ-ಮೇಲ್ ಫ್ರೆಂಡ್’ ಅಂದರು. ಅ ಕ್ಷಣ ನನ್ನನ್ನೇ ನಾ ಮರೆತೆ. ಹಾಗಿದ್ರೆ ನಾನು ಮೇಲ್ ಮಾಡಿದ್ದು ನನಗೆ ಮೇಲ್ ಬರುತ್ತಿದ್ದದು ನೇಮಿಚಂದ್ರರಿಂದಲೇ. ವ್ಹಾ! ಐ ಆಮ್ ರಿಯಲಿ ಲಕ್ಕಿ. ಮೇಡಂ ನನ್ನ ಗೆಳತಿಯರು ಹೊರಗೆ ಇದ್ದಾರೆ. ನಿಮ್ಮನ್ನು ಭೇಟಿ ಮಾಡಿಸಬೇಕು ಎಂದೆ. ಖಂಡಿತಾ ಬರುತ್ತೇನೆ ಎಂದೇಳಿ ನಮ್ಮ ಜೊತೆ ಒಂದಷ್ಟು ಹೊತ್ತು ಮಾತನಾಡಿದ್ದರು.
‘ಇಷ್ಟು ಚಿಕ್ಕ ವಯಸ್ಸಿನಲ್ಲಿ ಉದ್ಯೋಗದಲ್ಲಿದ್ದಿರಾ’ ಎಂದು ಆಶ್ಚರ್ಯದಿಂದ ಕೇಳಿದರು. ನಾವು ಸ್ನಾತಕೋತ್ತರ ಪದವಿ ಮುಗಿಸಿ ಬಂದವರೆಂದು ಹೇಳಿದ್ರೆ ಅವರಿಗೆ ನಂಬೋಕೇ ಕಷ್ಟವಾಗಿತ್ತು. ವಾಹನವೊಂದು ಅವರಿಗಾಗಿ ಕಾದಿತ್ತು. ಅದ್ರೂ ಅಟೋಗ್ರಾಫ್ ಕೊಡಲು ಹಿಂಜರಿಯಲಿಲ್ಲ.

ನನ್ನ ಪ್ರಕಾರ 'ಅಮ್ಮಚ್ಚಿಯೆಂಬ ನೆನಪು'

'ಅಮ್ಮಚ್ಚಿಯೆಂಬ ನೆನಪು' ಸಿನಿಮಾ ಇತ್ತೀಚಿಗೆ ನೋಡಿದೆ. ನಮ್ಮ ಸುತ್ತಮುತ್ತಲಿರುವ ಸಾವಿರಾರು ಮಹಿಳೆಯರ ಕೌಟಿಂಬಿಕ  ಹೋರಾಟದ ವಾಸ್ತವಿಕ ಕಥೆಯಿದು. ಪ್ರತಿಯೋರ್ವ ...