ಯಾಕೋ ಗೊತ್ತಿಲ್ಲ... ಕೆಲವರು ನನಗೆ ಪ್ರತಿನಿತ್ಯ ನೆನಪಾಗುತ್ತಾರೆ. ಅವರಲ್ಲಿ ಪ್ರತೀ ನಿತ್ಯ ಮಾತನಾಡಬೇಕು, ಅವರ ಮಾತುಗಳನ್ನು ಕೇಳಬೇಕು. ಅವರ ಮಾತುಗಳನ್ನು ಕೇಳುತ್ತಾ ಕೇಳುತ್ತಾ ನಾನೂ ಆದರ್ಶವಾದಿಯಾಗಬೇಕು ಎಂದು ಅನ್ನಿಸುತ್ತೆ. ನನಗೆ ಎಲ್ಲೆಂದರಲ್ಲಿ ಸ್ನೇಹಿತರು, ಮಾರ್ಗದರ್ಶಕರು... ಸಿಗುತ್ತಾರೆ. ಅದರೆ ಬಹುಕಾಲ (ಈಗಲೂ) ಹಚ್ಚಹಸಿರಾಗಿ ನನ್ನ ಮನಪಟಲದಲ್ಲಿ ಇರುವವರು - ನನ್ನ ಶಿಕ್ಷಕಿ ರತಿ ಮೇಡಂ, ಲೇಖಕಿ ನೇಮಿಚಂದ್ರ, ನನ್ನ ಸೀನಿಯರ್ ಶ್ರಿದೇವಿ, ನಟಿ ತಾರಾ, ನಿರೂಪಕಿ ಅಪರ್ಣಾ, ಡಾಕ್ಟರ್ ಬೀನಾ, ಪೂರ್ಣಿ, ಪಕದ್ಮನೆಯ ಯಶೋಧಕ್ಕ.
ಇವರನ್ನೆಲ್ಲಾ ನನ್ನ ಜೊತೆಯಲ್ಲೇ ಇರಿಸಬೇಕೆಂದು ಬಯಸುತ್ತೇವೆ. ಅವರ ಜೊತೆ ಕಳೆದಂತಹ ಅಮುಲ್ಯ ಕ್ಷಣಗಳನ್ನು ಮೆಲುಕು ಹಾಕುತ್ತಿರುತ್ತೇನೆ. ಅವರಿಗೆಲ್ಲಾ ಅದೆಷ್ಟು ಬಾರಿ ಎಸ್ ಎಮ್ ಎಸ್ ಕಳುಹಿಸಿ ಉಪದ್ರ ಮಾಡಿದೆನೋ!!.
ಅದ್ರೂ ಅವರ ಜೊತೆ ಮಾತನಾಡಿದಾಗೆಲ್ಲಾ ಒಂದು ರೀತಿಯ ಖುಷಿಯಾಗುತ್ತೆ. ಮೆಸೇಜ್ಗೆ ಮರುತ್ತರ ಬಂದ್ರೆ ವ್ಹಾರೆವ್ಹಾ ಗ್ರೇಟ್ ಎಂಬ ಉದ್ಗಾರ ಬರುತ್ತೆ.
Subscribe to:
Post Comments (Atom)
My first byline : A moment I will never forget
A few years ago, I had a dream to entering in the field of Journalism. That is why I chose Mass Communication and Journalism for my master...
-
ಶ್!! ಇದು ಮೌನದ ಸಮಯ. ಮಾತು ಮರೆಯುವ ಸಮಯ. ಮನದಲ್ಲಿ ನೂರು ನೋವುಗಳು ತುಂಬಿರುವ ಸಮಯ. ಹೌದು. ಇದು ವಿದಾಯ ಹೇಳುವ ಸಮಯ.... ಹೆದರಬೇಡಿ ನಾನು ಬ್ಲಾಗಿಗಾಗಲೀ, ಬ್ಲಾ...
-
ಮಂಗಳೂರಿನ ಸಂಸ್ಕ್ರತಿ, ಸಂಪ್ರದಾಯ, ವ್ಯವಹಾರ, ವಿದ್ಯಾಬ್ಯಾಸ ಪದ್ದತಿ, ಕಡಲ ಕಿನಾರೆ ಹೀಗೆ ಎಲ್ಲವನ್ನೂ ಇಷ್ಟ ಪಡುವವರು ಮಂಗಳೂರಿನ ಕನ್ನಡವನ್ನು ಮಾತ್ರ ವ್ಯಂಗ್ಯವಾಗಿ ಬಳಸು...
-
ದಿ ಬೈಸಿಕಲ್ ಥೀಫ್ ಸಿನಿಮಾವು ನೈಜತೆಯಿಂದ ಕೂಡಿದ್ದು, ಅಂತ್ಯದವರೆಗೂ ಕುತೂಹಲವನ್ನು ಉಂಟು ಮಾಡುತ್ತದೆ. ಎರಡನೇ ಮಹಾಯುದ್ದದ ಪೂರ್ವಕಾಲದಲ್ಲಿ ಜನರು ಉದ್ಯೋಗಕ್ಕಾಗಿ ಅಲೆಯುವ ...
2 comments:
ಅಷ್ಟಲ್ಲದೆ ಹೇಳಿದ್ದಾರೆಯೇ, ನಮ್ಮ ಸಂಗದಂತೆಯೇ ನಾವಾಗುತ್ತೇವೆ ಎಂದು.
ನಮಗಿಂತ ಹೆಚ್ಚು ತಿಳಿದವರ, ವಿವೇಕ ಉಳ್ಳವರ ಅಥವಾ ಪ್ರಜ್ಞೆಯ ಸ್ಥರದಲ್ಲಿ ಮೇಲಿರುವವರ ಸಂಗದಲ್ಲಿರುವಾಗ ನಮ್ಮ ಪ್ರಯತ್ನವಿಲ್ಲದೆಯೇ ಮನಸ್ಸು ಅಥವಾ ನಮ್ಮ ಪ್ರಜ್ಞೆ ಆ ಮಟ್ಟಕ್ಕೆ ಏರಿಬಿಟ್ಟಿರುತ್ತದೆ. ಮನಸ್ಸಿಗೆ ಎಂಥದ್ದೋ ನೆಮ್ಮದಿ, ಗ್ರೇಟ್ ಎನ್ನುವಂತಹ ಫೀಲಿಂಗ್, ಅವರಿಂದ ದೂರಾದ ತಕ್ಷಣ ಮತ್ತೆ ‘ನಮ್ಮತನ’ಕ್ಕೆ ನಾವು ಹಿಂತಿರುಗಿ ಬಿಟ್ಟಿರುತ್ತೇವೆ.
ವೀ...
ನೀವು ಎಸ್ಎಂಎಸ್ ಮಾಡಿದ ಉಪದ್ರಗಳೆಲ್ಲವನ್ನೂ ಒಂದು ಬುಟ್ಟಿಯಲ್ಲಿ ಹಾಕಿಟ್ಟು ಕಾಪಾಡಿಕೊಳ್ಳಿ. ಅವು ಕೂಡ ಒಳ್ಳೆಯ ನೆನಪುಗಳಾಗುತ್ತವೆ.
Post a Comment