February 4, 2008

ಮನುವಿನ ನೂಪುರ ಭ್ರಮರಿ

ಹಾಯ್,


ನನಗೊಬ್ಬಳು ಗೆಳತಿಯಿದ್ದಾಳೆ. ಶುದ್ಧ ತರಲೆ ಅಂಥನೇ ಹೇಳಬಹುದು. ನನಗಿಂತಲೂ ಒಂದು ಪಟ್ಟು ಜಾಸ್ತಿನೇ ಅವಳ ತುಂಟಾಟಗಳು ನಡೆಯುತ್ತವೆ ಎಂದರೂ ತಪ್ಪಾಗದು. ಅವಳ ಮೇಲೆ ಪ್ರೀತಿ ಹೆಚ್ಚಾದಗೆಲ್ಲಾ ನನ್ನ ಮೊಬೈಲ್ ನಲ್ಲಿ ಅವಳ ಹೆಸರು ಮನು ಎಂದಿರುತ್ತಿದ್ದರೆ, ಕೋಪ ಬಂದಾಗ ಮನೋರಮಾ ಬಿ ಎನ್ ಎಂದು ಪೂರ್ಣ ಹೆಸರನ್ನು ಕಾಣಬಹುದು.

ಈ ಮನುಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸುವ ದೈರ್ಯವಿಲ್ಲ ಎಂಬುದಾಗಿ ಒಂದೊಮ್ಮೆ ನಾನು ಕನ್ನಡ ಪ್ರಭದ ‘ಕಾಲೇಜು ರಂಗ’ದ ಮುಖಾಂತರ ತಿಳಿಸಿದ್ದೆ. ಆ ದಿನಗಳಲೆಲ್ಲಾ ಆಕೆ ನನ್ನಲ್ಲಿ ಮಾತು ಬಿಟ್ಟಿದ್ದಳು. ಆದ್ರೂ ನಮ್ಮಿಬ್ಬರಲ್ಲಿ ಅದೆನೋ ಹೊಂದಾಣಿಕೆ, ಆತ್ಮೀಯತೆ ಇತ್ತು.


ಕ್ಷಮಿಸಿ. ಇಂದು ಅವಳ ಬಗ್ಗೆ ಬ್ಲಾಗಿನಲ್ಲಿ ಬರೆಯಲು ಮುಖ್ಯ ಕಾರಣ.... ಅವಳು ಭರತನಾಟ್ಯಂ ಹಾಗೂ ಇತರೆ ನ್ರತ್ಯಗಳ ಕುರಿತಾಗಿನ ತನ್ನದೇ ಆದ ದ್ವೈಮಾಸಿಕ (ಎರಡು ತಿಂಗಳಿಗೊಮ್ಮೆ) ವೊಂದನ್ನು ಕಳೆದ ಒಂದು ವರ್ಷದ ಹಿಂದೆ ಆರಂಭಿಸಿದ್ದಳು. ‘ನೂಪುರ ಭ್ರಮರಿ’ ಕಳೆದ ಒಂದು ವರ್ಷದಲ್ಲೇ ಬಹು ಖ್ಯಾತಿಯನ್ನೇ ಪಡೆಯಿತು ಎಂಬುದರಲ್ಲಿ ಎರಡು ಮಾತಿಲ್ಲ.
ಇದೇ ಫೆಬ್ರವರಿ ೧೦ರಂದು ಮಡಿಕೇರಿಯಲ್ಲಿ ‘ನೂಪುರ ಭ್ರಮರಿ’ಯ ವರ್ಷಾಚರಣೆಯು ಸಾಯಂಕಾಲ ೪ ಗಂಟೆಗೆ ಭಾರತೀಯ ವಿದ್ಯಾ ಭವನ ಮಡಿಕೇರಿಯ ದೇವಸ್ಥಾನ ರಸ್ತೆಯಲ್ಲಿರುವ ಭಾರತೀಯ ವಿದ್ಯಾ ಭವನದಲ್ಲಿ ನಡೆಯಲಿದೆ. ಅಂದು ‘ನೂಪುರ ಭ್ರಮರಿ’ಯ ವೆಬ್ ಸೈಟನ್ನು ಉದ್ಟಾಟಿಸುವ ಗುಟ್ಟೊಂದನ್ನು ಮನು ನನ್ನಲ್ಲಿ ತಿಳಿಸಿದ್ದಾಳೆ...
ಮನು ನಿನಗೆ ನನ್ನ ಆತ್ಮೀಯ ವಂದನೆಗಳು. ನಿನ್ನ ಕಾರ್ಯದಲ್ಲಿ ಯಶಸ್ಸು ಲಭಿಸಲಿ ಎನ್ನುವ ಹಾರೈಕೆ ನಿನ್ನ ಜಗಳಗಂಟಿ ಗೆಳತಿಯದು.

January 24, 2008

ಸದಾಕಾಲ ನೆನಪಿನಲ್ಲಿರುವವರು...

ಯಾಕೋ ಗೊತ್ತಿಲ್ಲ... ಕೆಲವರು ನನಗೆ ಪ್ರತಿನಿತ್ಯ ನೆನಪಾಗುತ್ತಾರೆ. ಅವರಲ್ಲಿ ಪ್ರತೀ ನಿತ್ಯ ಮಾತನಾಡಬೇಕು, ಅವರ ಮಾತುಗಳನ್ನು ಕೇಳಬೇಕು. ಅವರ ಮಾತುಗಳನ್ನು ಕೇಳುತ್ತಾ ಕೇಳುತ್ತಾ ನಾನೂ ಆದರ್ಶವಾದಿಯಾಗಬೇಕು ಎಂದು ಅನ್ನಿಸುತ್ತೆ. ನನಗೆ ಎಲ್ಲೆಂದರಲ್ಲಿ ಸ್ನೇಹಿತರು, ಮಾರ್ಗದರ್ಶಕರು... ಸಿಗುತ್ತಾರೆ. ಅದರೆ ಬಹುಕಾಲ (ಈಗಲೂ) ಹಚ್ಚಹಸಿರಾಗಿ ನನ್ನ ಮನಪಟಲದಲ್ಲಿ ಇರುವವರು - ನನ್ನ ಶಿಕ್ಷಕಿ ರತಿ ಮೇಡಂ, ಲೇಖಕಿ ನೇಮಿಚಂದ್ರ, ನನ್ನ ಸೀನಿಯರ್ ಶ್ರಿದೇವಿ, ನಟಿ ತಾರಾ, ನಿರೂಪಕಿ ಅಪರ್ಣಾ, ಡಾಕ್ಟರ್ ಬೀನಾ, ಪೂರ್ಣಿ, ಪಕದ್ಮನೆಯ ಯಶೋಧಕ್ಕ.

ಇವರನ್ನೆಲ್ಲಾ ನನ್ನ ಜೊತೆಯಲ್ಲೇ ಇರಿಸಬೇಕೆಂದು ಬಯಸುತ್ತೇವೆ. ಅವರ ಜೊತೆ ಕಳೆದಂತಹ ಅಮುಲ್ಯ ಕ್ಷಣಗಳನ್ನು ಮೆಲುಕು ಹಾಕುತ್ತಿರುತ್ತೇನೆ. ಅವರಿಗೆಲ್ಲಾ ಅದೆಷ್ಟು ಬಾರಿ ಎಸ್ ಎಮ್ ಎಸ್ ಕಳುಹಿಸಿ ಉಪದ್ರ ಮಾಡಿದೆನೋ!!.

ಅದ್ರೂ ಅವರ ಜೊತೆ ಮಾತನಾಡಿದಾಗೆಲ್ಲಾ ಒಂದು ರೀತಿಯ ಖುಷಿಯಾಗುತ್ತೆ. ಮೆಸೇಜ್ಗೆ ಮರುತ್ತರ ಬಂದ್ರೆ ವ್ಹಾರೆವ್ಹಾ ಗ್ರೇಟ್ ಎಂಬ ಉದ್ಗಾರ ಬರುತ್ತೆ.

January 18, 2008

ಯಾದ್ ವಶೇಮ್ ೨

ನೇಮಿಚಂದ್ರರವರ ಕಾದಾಂಬರಿಯಲ್ಲಿ ಇಂತಹ ಹಲವು ಮನತಟ್ಟುವ ವಾಕ್ಯಗಳಿವೆ. ದಿನನಿತ್ಯ ಬಳಸಬಹುದಾದ ಡೈಲಾಗುಗಳಿವೆ. ನನಗಿಷ್ಟವಾಗಿದೆ. ಬಹುಶಃ ನಿಮಗೂ ಇಷ್ಟವಾಗಬಹುದು. ಓದಿ ನೋಡಿ.

  • ಬದುಕಬೇಕು ಹಂಚಿಕೊಂಡು, ಬದುಕಬಹುದೆ ಕಿತ್ತುಕೊಂಡು?
  • ಹೇಗೆ ವಿವರಿಸಲಿ ಭಾರತವನ್ನು? ಒಂದು ಧರ್ಮ, ಒಂದು ದೇವರ ಈ ನೆಲದಲ್ಲಿ ನಿಂತು ನೂರು ಧರ್ಮ, ಸಾವಿರ ಸಾವಿರ ದೇವರುಗಳ ನಾಡಿನ ಬಗ್ಗೆ ಹೇಗೆಂದು ವಿವರಿಸಲಿ. ಮುಕ್ಕೋಟಿ ದೇವರುಗಳು... ಅವರನ್ನು ಸಹಸ್ರ ಸಹಸ್ರ ನಾಮದಲ್ಲಿ ಕರೆಯುತ್ತಾರೆ. ಕೂಗುತ್ತಾರೆ, ಶಪಿಸುತ್ತಾರೆ, ಬೇಡುತ್ತಾರೆ, ಬೈಯುತ್ತಾರೆ, ಮುನಿಯುತ್ತಾರೆ, ರಾಜಿಯಾಗುತ್ತಾರೆ... ಸಾವಿರ ಹೆಸರಿಟ್ಟು ಕೂಗಿ ಕೊನೆಗೆ ದೇವನೊಬ್ಬನೇ ಎನ್ನುತ್ತಾರೆ.
  • ನನ್ನನ್ನು ಕಾಡಿದ್ದು ಇತಿಹಾಸದ ಸಾವುಗಳಲ್ಲ, ವರ್ತಮಾನದ ಸಾವುಗಳು. ಭವಿಷ್ಯದ ಸಾವುಗಳು. ನಾನು ನಿನ್ನೆಗಳ ನೂರು ನೋವನ್ನು ಮರೆಯಲು ಸಿದ್ದ. ನಾಳೆಗಳ ಭರವಸೆಯನ್ನು ಯಾರಾದರೂ ನನಗೆ ನೀಡಿದರೆ...
  • ಮನುಷ್ಯ ಮನುಷ್ಯನ ನಡುವೆ ದ್ವೇಷವಿಲ್ಲದ, ಗೋಡೆ ಇಲ್ಲದ ಗುಮಾನಿ ಇಲ್ಲದ ಪೂರ್ಣ ವಿಶ್ವಾಸದ ಒಂದು ಸುಂದರ ಸಂಬಂಧದ ಸೇತುಬಂಧದ ಕನಸು ನನ್ನದು.
  • ಸಾವಿರ ವರ್ಷಗಳಿಂದ ಜೊತೆಗೆ ಬದುಕಿದ್ದ ಮುಸ್ಲಿಂಮರು, ಯಹೂದಿಗಳೇಕೆ ಒಂದಾಗಲು ಸಾಧ್ಯವಿಲ್ಲ? ಸಾಧ್ಯವಿಲ್ಲವೆ ಮನಸ್ಸು ಮಾಡಿದರೆ ಒಡೆದ ಮನಸ್ಸುಗಳನ್ನು ಕೂಡಿಸಲು? ಸಾಧ್ಯವಿಲ್ಲವೆ ಶಾಂತಿಗೊಂದು ಅವಕಾಶ ನೀಡಲು? ನಡುವೆ ಎಳೆದ ಗಡಿಗಳನ್ನು, ಗೆರೆಗಳನ್ನು ಅಳಿಸಿ ಕದನ ವಿರಾಮಕ್ಕೆ ಕರೆ ನೀಡಲು ಸಾಧ್ಯವೇ ?
  • ಇತಿಹಾಸದ ತಪ್ಪುಗಳನ್ನು ತಿದ್ದಲು ಹೊರಟರೆ, ಹೊಸ ತಪ್ಪುಗಳನ್ನು ಮಾಡುತ್ತೇವೆ. ಇತಿಹಾಸವನ್ನು ಭೂಪಕ್ಕೆ ಬಿಟ್ಟುಬಿಡುವುದು ಮೇಲು. ಭವಿಷ್ಯದ ಭರವಸೆಯಷ್ಟೇ ನಮಗಿರಲಿ. ಮತ್ತೆಂದೂ ಯಾವ ದೇವಲಯವೂ ಒಡೆಯದಿರಲಿ. ಯಾವ ಮಸೀದಿಯು ಉರುಳದಿರಲಿ. ಜನರ ಮನಸ್ಸಿನಲಿ ಕಟ್ಟಿದ ನಂಬಿಕೆಯ ಗೋಪುರಗಳು ಕುಸಿಯದಿರಲಿ. ಯಾವ ಮಾನವನೂ ಮತ್ತೆ ಶಿಲುಬೆಗೇರದಿರಲಿ.
  • ಏಕೋ ಮನಸ್ಸಿಗೆ ಹಿತವಿಲ್ಲ. ಏನು ವಾದಿಸುತ್ತಿದ್ದೇನೆ? ಏಕೆ ವಾದಿಸುತ್ತಿದ್ದೇನೆ? ಇಂದಿನ ಸಮಸ್ಯೆಗೆ ಸಾವಿರ ಸಾವಿರ ವರ್ಷಗಳ ಕತೆಯೇಕೆ ಬೇಕು?
  • ದಿಟದಲ್ಲಿ ದ್ವೇಷಕ್ಕೆ ಕಾರಣಗಳಿರಲಿಲ್ಲ. ನೆಪಗಳು ಮಾತ್ರವಿದ್ದವು.
  • ಉತ್ತರಗಳ ಹುಡುಕಬೇಕಿದೆ ಪ್ರಶ್ನೆಯಾದ ಗೋಡೆಯಾಚೆಗೆ
  • ಭೂತದ ಭೂತಗಳನ್ನು ಉಚ್ಚಾಟಿಸಿ ಭವಿಷ್ಯದತ್ತ ಮುಖ ಮಾಡಿ ಹೊರಟ ಝಳಕು ಆ ಎಳೆಯ ಕಣ್ಣುಗಳಲ್ಲಿತ್ತು!
  • ನಾನು ಬದುಕುವೆ, ಬದುಕಬೇಕು. ಇದಕ್ಕಿಂತ ಹೆಚ್ಚಿನದು ಏನು ಆಗಬಲ್ಲದು. ನರಕದ ಪಾತಾಳಕ್ಕೆ ತಲುಪಿ ನಿಂತ ಮೇಲೆ ಇನ್ಯಾರ ಭಯ, ಇನ್ಯಾತರ ಭಯ.

December 17, 2007

ಕ್ರಿಸ್ಮಸ್ ಯಾರಿಗಿಷ್ಟವಿಲ್ಲ?




ಕಳೆದ ವರ್ಷ ಆಚರಿಸಿದಂತಹ ಕ್ರಿಸ್ಮಸ್ ಸಂಭ್ರಮ ಇನ್ನೂ ಹಚ್ಚ ನೆನಪಾಗಿಯೇ ಇದೆ. ಅದಾಗಲೇ ಮಗದೊಂದು ಕ್ರಿಸ್ಮಸ್ ಹತ್ತಿರ ಬರುತ್ತಿದೆ. ಎಲ್ಲರ ಮನೆಗಳಲ್ಲಿ ಕ್ರಿಸ್ಮಸ್ ಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಒಂದೆಡೆ ಕ್ರಿಸ್ಮಸ್ ಕುಸ್ವಾರ್ ತಯಾರಿಯಾದರೆ ಉಳಿದೆಡೆ ಗೋದಲಿ, ಕ್ರಿಸ್ಮಸ್ ಟ್ರೀ ಗಾಗಿನ ಸಿದ್ಧತೆ ನಡೆಯುತ್ತಿದೆ. ಮೊನ್ನೆ ತಾನೆ ನಿನ್ನೆ ಜೀ ಕನ್ನಡದವರು ಮೈಸೂರಿನ ಆಶ್ರಮವೊಂದಕ್ಕೆ ಕ್ರಿಸ್ಮಸ್ ಆಚರಣೆಗಾಗಿ ಹೋಗಿದ್ದರು. ಅಲ್ಲಿನ ಮಕ್ಕಳೊಂದಿಗೆ ಸಾಂತಾ ಕ್ಲಾಸ್ ಕುಣಿದದ್ದೇ ಕುಣಿದದ್ದು. ನನಗೂ ಮೈಸೂರನ್ನು ನೋಡುವ ಅದ್ರಷ್ಟ ಇತ್ತು ಎಂದೆನಿಸುತ್ತೆ. ಜೀ ತಂಡದೊಡನೆ ನಾನೂ ಅಲ್ಲಿಗೆ ಹೋಗಿದ್ದೆ.




ನನ್ನ ಕ್ರಿಸ್ಮಸ್ ಸಂಭ್ರಮದ ಆ ದಿನಗಳನ್ನು ನೆನಪಿಸುತ್ತಿದ್ದಂತೆ ಇತ್ತೀಜೆಗೆ ಬಿಡುಗಡೆ ಆಗಿದ್ದ ‘ಆ ದಿನಗಳು’ ಸಿನಿಮಾ ನಟ ಶರತ್ ಲೋಹಿತಾಶ್ವ ತನ್ನ ಕುಟುಂಬದೊಡನೆ ಅಲ್ಲಿಗೆ ಆಗಮಿಸಿ ಮರೆಯಲಾಗದಂತಹ ಮನೋರಂಜನೆಯನ್ನು ನೀಡಿದರು. ಶರತ್ ಅಲ್ಲಿನ ಅನಾಥ ಮಕ್ಕಳಿಗೆ ಹಾಡುಗಳನ್ನು ಕಲಿಸಿ ತಾನೂ ಒಬ್ಬ ಗಾಯಕ ಎಂಬುದನ್ನು ಸಾಬೀತು ಪಡಿಸಿದರು. ಮಕ್ಕಳ ಒಡನಾಟ ಕಂಡು ಅಲ್ಲಿದ್ದ ವಿದೇಶಿಯರೂ ಪುಲಕಿತರಾಗಿದ್ದರು.
ಮೈಸೂರಿನ ಸೇಂಟ್ ಪಿಲೋಮಿನಾ ಚರ್ಚ್ ನಲ್ಲಿ ಕ್ರಿಸ್ಮಸ್ ತಯಾರಿ ಎಂದಿನಂತೆ ಸಾಗಿತ್ತು.
ಈ ಮಧ್ಯೆ ಶೋರೂಮ್ ಗಳಲ್ಲಿ ಮಾರುಕಟ್ಟೆಗಳಲ್ಲಿ ಕ್ರಿಸ್ಮಸ್ ಟ್ರೀ, ಕ್ರಿಸ್ಮಸ್ ನಕ್ಷತ್ರ, ಕ್ರಿಸ್ಮಸ್ ಕೇಕ್, ಗ್ರೀಟಿಂಗ್ಸ್ ಗಳನ್ನು ನೋಡುವಾಗ ಎಲ್ಲವನ್ನೂ ಖರೀದಿಸುವುದಿಲ್ಲದಿದ್ದರೂ ಪರ್ವಾಗಿಲ್ಲ... ಕಣ್ತುಂಬ ನೋಡಿ ಆನಂದಿಸೋಣವೆಂದು ಕೊಳ್ಳುತ್ತೇನೆ.


November 14, 2007

ಸವಿನೆನಪಾಗಿ ಉಳಿದ ವೀಣಾಧರಿ


ಸಂದರ್ಶನವನ್ನು ಹೇಗೆ ಮಾಡುವುದೆಂಬುದರ ಕುರಿತಾಗಿ ಹೆಚ್ಚೆನೂ ಗೊತ್ತಿಲ್ಲದ ದಿನಗಳಲ್ಲಿ ನಾನು ವೀಣಾಧರಿ ಅವರ ಸಂದರ್ಶನ ಮಾಡಿದ್ದೆ. ಅದು ನನ್ನ ಪ್ರಪ್ರಥಮ ಸಂದರ್ಶನವೂ ಆಗಿತ್ತು. ವೀಣಾಧರಿ ಅದಾಗಲೇ ಚಿರ ಪರಿಚಿತರು. ರವಿ ಬೆಳಗೆರೆಯಿಂದ ವೀಣಕ್ಕ ಎಂದೇ ಕರೆಯಲ್ಪಟ್ಟವರು. ವೀಣಾಧರಿ ಅವರನ್ನು ಪ್ರಥಮ ಬಾರಿ ನೋಡಿದಾಗ ನನಗೆ ಆಶ್ಚರ್ಯವಾಗಿತ್ತು. HIV ಪಾಸಿಟಿವ್ ಮಹಿಳೆ ಇಷ್ಟೊಂದು ಸಂತಸದಿಂದಿರಲು ಹೇಗೆ ಸಾಧ್ಯ? ಅವರ ಅ ಕ್ರಿಯಾಶೀಲತೆ ಮುಖದಲ್ಲಿ ಕಾಣುತ್ತಿರುವ ಉಮ್ಮಸ್ಸು ಕಂಡು ವ್ಹಾರೆವ್ಹಾ she is really great ಎಂದು ಮನದಲ್ಲೇ ಅಭಿನಂದಿಸಿದೆ.

ತಾನು ಇತರೆ ಕೆಲಸದಲ್ಲಿ ನಿರತರಾಗಿರುವಾಗಲೇ ನನ್ನ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ಕ್ಯಾಮೆರಾ ಕೈಕೊಟ್ಟಿದ್ದರಿಂದ ಅವರೊಂದಿಗೆ ನಿಂತು ಫೋಟೋ ತೆಗಿಸಬೇಕೆಂದುಕೊಂಡ ಆಶೆ ಅಂದು ನೆರವೇರಲಿಲ್ಲ. ವೀಣಾಧರಿಗೆ ನನ್ನ ಕೊನೇಯ ಪ್ರಶ್ನೆ ಹೀಗಿತ್ತು: ನೀವು ಹೀಗೆ ಏಡ್ಸ್ ರೋಗಿಗಳಿಗೆ ಆಶಾಕಿರಣವಾಗಲು ಹೋಗಿ, ಜನರಲ್ಲಿ ಏಡ್ಸ್ ಕುರಿತ ಭಯ ದೂರವಾಗಿ ಅನೈತಿಕ ಚಟುವಟಿಕೆಗಳು ಹೆಚ್ಚಾಗುವುದಿಲ್ಲವೇ?

ನನ್ನ ಪ್ರಶ್ನೆಯಿಂದ ಅವರು ತುಂಬಾನೇ ಬೇಸರಗೊಂಡಿದ್ದರು. ನಾನು ಆ ಪ್ರಶ್ನೆಯನ್ನು ವೀಣಾಧರಿ ಎಂಬ ಉತ್ತಮ ಸಮಾಜ ಸೇವಕಿಗೆ ಕೇಳಬಾರದಿತ್ತೇನೊ ಎಂದು ಮತ್ತೆ ನನಗೆ ಅನ್ನಿಸಿತ್ತು. ಆ ಸಂದರ್ಶನ ನಂತರ ಮತ್ತೆ ಒಂದೆರಡು ಬಾರಿ ನಾನು ಅವರನ್ನು ಬೇಟಿಯಾಗಿದ್ದೆ.

ಅದೊಂದು ಸಮಾರಂಭದಲ್ಲಿ ವೀಣಾಧರಿ ಹೇಳಿದ್ದರು ಏಡ್ಸ್ ಎಂದಾಕ್ಷಣ ಸಾವಲ್ಲ ಯಾವ ಖಾಯಿಲೆಗೂ ಇಲ್ಲದ ವಿಶೇಷ ದಿನ ಏಡ್ಸ್ ರೋಗಕ್ಕೆ ಯಾಕೆ? ಏಡ್ಸ್ ರೋಗಿಗಳನ್ನು ಅಷ್ಟೊಂದು ಕೇವಲವಾಗಿ ನೋಡುವ ಅವಶ್ಯಕತೆಗಳಿಲ್ಲ. ಇತ್ತೀಜೆಗೆ ಏಡ್ಸ್ ರೋಗಿಗಳಿಂದ ವೈದ್ಯರುಗಳು ಬ್ಲ್ಯಾಕ್ ಮೇಲ್ ಮಾಡಿ ಲಕ್ಷಗಟ್ಟಲೆ ಹಣ ವಸೂಲಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಏಡ್ಸ್ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂಬ ಅಂಕಿ ಅಂಶಗಳೆಲ್ಲ ಸುಳ್ಳು. ಒಬ್ಬ ಏಡ್ಸ್ ರೋಗಿಯನ್ನು ಅವನು ಹೋದ ಕಡೆಯಲೆಲ್ಲ ಪರೀಕ್ಷಿಸಿ ನೊಂದಣಿ ಮಾಡಿಸುತ್ತಾರೆ. ಇದರಿಂದ ಅಂಕಿ ಅಂಶಗಳಲ್ಲಿ ಏರು ಪೇರಾಗುತ್ತಿದೆ.

ವೈದ್ಯರುಗಳಿಂದ ಹಾಗೂ ಇತರೆ ಸಂಸ್ಥೆಗಳಿಂದ ವಂಚಿತರಾದ HIV ಪೀಡಿತರು ತಮ್ಮ ಸಮಸ್ಯೆಗಳನ್ನು ಬರೆದಂತಹ ಹಲವಾರು ದಾಖಲೆಯ ಪತ್ರಗಳು ತಮ್ಮಲ್ಲಿ ಇವೆ. ಅವುಗಳನ್ನು ಸಂಗ್ರಹಿಸಿಟ್ಟಿದ್ದೇವೆ. ಮುಂದೊಂದು ದಿನ ಇವೆಲ್ಲವುಗಳಿಗೂ ಪರಿಹಾರ ಒದಗಿಸುತ್ತೇನೆ ಎಂದಿದ್ದ ವೀಣಾಧರಿ ಇಂದು ನಮ್ಮಿಂದ ಬಹುದೂರ ಹೋಗಿದ್ದಾರೆ. ಅವರ ಸಾವಿನ ಸುತ್ತ ಹಲವು ಅನುಮಾನಗಳಿವೆ ಎಂಬ ಅಂಶದೆಡೆಗೆ ಇತ್ತಿಚೆಗೆ ಮಾಧ್ಯಮಗಳು ಪ್ರಕಟಿಸಿದ್ದವು. ಅವುಗಳನ್ನು ನಿರ್ಲಕ್ಷಿಸುವಂತಿಲ್ಲ.

October 16, 2007

ಯಾದ್ ವಶೇಮ್ - ೧

  • ಹಗಲು ಬಾಡುವ ಹೊತ್ತು ಇರುಳು ಮೆಲ್ಲನೆ ಕಣ್ತೆರೆದಿತ್ತು. ಸೂರ್ಯ ಮುಳುಗಿತ್ತಿದ್ದ ಸಮುದ್ರದಾಳಕ್ಕೆ ಇಳಿಯುತ್ತಿದ್ದ. ಇಳಿವ ಸೂರ್ಯನ ಕೆಂಪು ಬೆಳಕಿನಲ್ಲಿ ನಮ್ಮ ಬದುಕಿನ ಸಂಜೆಯಲ್ಲಿ ನೆನಪುಗಳ ಬುತ್ತಿ ಬಿಚ್ಚಿಕೊಂಡಿತು.

  • ಈ ಹುಡುಗಿ ನನ್ನ ಬದುಕಿಗೆ ಬಂದು ಅದೆಷ್ಟು ವರ್ಷಗಳಾದವು. ದಶಕಗಳೇ ಕಳೆದು ಹೋದವು. ಆದರೂ ಕೆಲವೊಮ್ಮೆ ಅನಿತಾ ಅಪ್ಪಟ ಅಪರಿಚಿತಳಂತೆ ಕಂಡುಬಿಡುತ್ತಾಳೆ - ವಿವೇಕ್

  • ಯುದ್ದ ಮುಗಿದಿತ್ತು ಯುರೋಪಿನಲ್ಲಿ. ನನ್ನೆದೆಯ ಕದನಕ್ಕೆ ಕೊನೆ ಎಲ್ಲಿತ್ತು? ಎಲ್ಲಿ ಅಮ್ಮ ಅಕ್ಕ ತಮ್ಮ? ಎಲ್ಲವರು? ಬದುಕುಳಿದರೆ, ಬಲಿಯಾದರೆ, ಹೇಳಲು ಯಾರಿದ್ದರು? ಇಲ್ಲಿ ಒಡೆಯಬಹುದೆ ನನ್ನ ಇತಿಹಾಸದ ಒಡವುಗಳೆಲ್ಲ. ಮರಳಿ ಎದುರಾಗಬಹುದೆ, ಹೊರಳಿ ಬರಬಹುದೆ ನನ್ನವರು ಚರಿತ್ರೆಯ ಆಳದಿಂದೆದ್ದು?

  • ಎಷ್ಟೊಂದು ಬದುಕು ಹಿಂದಿದೆ. ಒಂದಿಷ್ಟೇ ಬದುಕು ಮುಂದೆ. ಕಳೆದ ಬದುಕಿನ ತುಂಬಾ ಹುಡುಕಾಟವಿದೆ- ಹೊರಗೆ ಹುಡುಕಿದ್ದು, ನನ್ನೊಳಗೆ ಹುಡುಕಿದ್ದು, ಎದೆಯಕದಗಳನ್ನೆಲ್ಲ ತಟ್ಟಿ ತಡಕಿದ್ದು, ಯಾರು ನಾವು? ಎಲ್ಲಿಂದ ಬಂದೆವು?

  • ಕಳೆದುಕೊಳ್ಳಬಹುದಾದ ಎಲ್ಲವನ್ನೂ ಕಳೆದುಕೊಂಡ ಮೇಲೆ ಇನ್ನು ಕಳೆದುಕೊಳ್ಳುವ ಭಯವೆ ಇಲ್ಲದ ನಿರ್ಲಿಪ್ತತೆ ಆ ಬಿರಿದ ಕಣ್ಣುಗಳಲ್ಲಿ.

  • ಗೋರಿಗಳ ಎದುರಲ್ಲಿ ಸತ್ತವರ ನಡುವೆ ಅಗಲಿದ ಆತ್ಮಗಳ ಇರುವಲ್ಲಿ ಎರಡು ಎಳೆಯ ಜೀವಗಳ ನಡುವೆ ಒಂದು ನೋವಿನ ಸಂಬಂಧ, ಮೌನದಲ್ಲಿ, ನಿಶ್ಶಬ್ದದಲ್ಲಿ ಏಕಾಂತದಲ್ಲಿ ಆರಂಭವಾಗಿತ್ತು... ಆ ಸಂಬಂಧಕ್ಕೆ ಯೌವನದ ಬುದ್ಬುರಗಳಿರಲಿಲ್ಲ, ಕಿಶೋರದ ಆವೇಗವಿರಲಿಲ್ಲ. ಧುಮುಕುವ ಜಲಪಾತದ ಭೋರ್ಗರೆತವಿರಲಿಲ್ಲ. ಸಮುದ್ರದ ಮೊರೆತವಿರಲಿಲ್ಲ.

  • ಬಹುಶ: ನನಗೆಂದೂ ಸ್ಮಶಾನ, ಗೋರಿಪಾಳ್ಯ ಇವೆಲ್ಲವೂ ಭಯದ ವಿಷಯವಾಗಲೇ ಇಲ್ಲ.

  • ನನ್ನದೊಂದೇ ಪ್ರಶ್ನೆ - ಯುದ್ದ ಯಾವಾಗ ಮುಗಿಯುತ್ತೆ.

  • ಹೊರಗಿನಿಂದ ಬಂದ ಬ್ರಿಟಿಷರನ್ನು ತೊಲಗಿ ಭಾರತದಿಂದ ಎಂದು ಮಾಡಬಹುದು. ನಮ್ಮೊಳಗಿನಿಂದಲೇ ನಮ್ಮ ನಡುವೆಯೇ ಹುಟ್ಟುವ ಹಿಟ್ಲರುಗಳನ್ನು ತೊಲಗಿಸುವುದು ಹೇಗೆ?

  • ಹಣ ಏನು ಯಾರ್ ಬೇಕಾದ್ರು ಸಂಪಾದಿಸ್ತಾರೆ. ಗುಣ ತರಾಕಾಗುತ್ತಾ.. ಅಪ್ಪಟ ಅನಕ್ಷರಸ್ಥ ಅಮ್ಮ ಹೇಳಿದ್ದಳು!

  • ಮತ್ತೆಲ್ಲವನ್ನೂ ಎಲ್ಲರನ್ನೂ ಕಿತ್ತುಕೊಂಡಿದೆ ಬದುಕು ನನ್ನಿಂದ. ಶಾಶ್ವತ ವಿಷಾದದ ಏಕತಾನತೆಯಷ್ಟೇ ಇನ್ನು ಉಳಿದಿರುವುದು.

  • ಯಾರು ಉಳಿದಿರಬಹುದು ನನ್ನ ಇಡೀ ವಂಶದಲ್ಲಿ? ಯಾರು ಉಳಿದಿರಬಹುದು ನನ್ನ ರಕ್ತ ಹಂಚಿಕೊಂಡವರಲ್ಲಿ. ನನ್ನ ಮಕ್ಕಳಿಗೆ, ಮೊಮ್ಮಕ್ಕಳಿಗೆ, ಅತ್ತೆಯಂತೆಯೇ ನಾನೂ ನನ್ನ ವಂಶದ ಕತೆಗಳನ್ನು ಹೇಳಬಲ್ಲೆನೆ? ನನ್ನೊಳಗಿನ ಈ ಕತೆಗಳು ನನ್ನೊಡನೆಯೇ ಮಣ್ಣಾಗುತ್ತವೆಯೇ?

  • ಬರಲಿರುವ ನಾಳೆಗಳಲ್ಲಿ ನಿನ್ನೆಗಳ ಹುಡುಕಿ ಹೋಗುವ ತುಡಿತವಿತ್ತು. ಬಂದ ಹಾದಿಯನ್ನೊಮ್ಮೆ ಹಿಂದೆ ತಿರುಗಿ ನೋಡುವ ತವಕವಿತ್ತು. ಅವೆಲ್ಲವೂ ಸದ್ಯಕ್ಕೆ ಹ್ಯಾನಾಳ ಎದೆಯ ಗೂಡಿನಲ್ಲಿ ಭದ್ರ ಕದ ಬಿಗಿದು ಅಗುಳೆ ಹಾಕಿತ್ತು.

  • ಮರೆಯಬಹುದೆ ತನ್ನವರನ್ನು ಅವರ ಸಾವು ಬದುಕಿನ ಪತ್ತೆ ಇಲ್ಲದ ಭೂತವನ್ನು, ಹಿಂದೆ ಬಿಟ್ಟು ಬಂದ ಬದುಕನ್ನು?

  • ‘ಹಾಂ. ನಡೆದಿತ್ತು ಒಂದೇ ಒಂದು’ ಹಿಟ್ಲರನ ವಿರುದ್ದ ನಡೆದ ಒಂದೇ ಒಂದು ಸಾರ್ವಜನಿಕ ಪ್ರತಿಭಟನೆ - ಮಹಿಳೆಯರದಾಗಿತ್ತು!

  • ನನಗೆ ನಂಬಿಕೆ ಇದೆ ಜನಗಳ ಶಕ್ತಿಯಲ್ಲಿ ಅನ್ಯಾಯದ ವಿರುದ್ದ ದನಿ ಎನ್ನುವ ಜನರ ಸಂಘಟನೆಯಲ್ಲಿ ನಾನೇನೂ ಆಗದಿದ್ದರೂ, ಆ ಗುಂಪಿನಲ್ಲೊಂದು ಸಣ್ಣ ದನಿಯಾಗಲು ಬಯಸುತ್ತೇನೆ.

  • ಹಿಟ್ಲರ್ ನಿಜಕ್ಕೂ ಅಂದು ಸತ್ತನೆ? ಇಲ್ಲ ಇಲ್ಲಿ ಎಲ್ಲೋ ಯಾರದೋ ಮಿದುಳಲ್ಲಿ, ಎದೆಯಲ್ಲಿ ಇನ್ನೂ ಉಸಿರಾಡುತ್ತಿರುವನೆ, ಸಮಯ ಕಾದು ಜಿಗಿದು ಹೊರಬರಲು? ಹಿಟ್ಲರ್ ಎಲ್ಲಿ ಬೇಕಾದರೂ ಹುಟ್ಟಬಹುದು. ಅಮೇರಿಕಾದಲ್ಲೂ ಇಸ್ರೇಲಿನಲ್ಲೂ ಅಹಿಂಸೆಯನ್ನೇ ಬೋಧಿಸಿದ ನಮ್ಮ ಭಾರತದಲ್ಲೂ. ನಮ್ಮೆದ್ಯ ಅಸಹನೆಯಲ್ಲಿ ಹಿಟ್ಲರ್ ಇದ್ದಾನೆ. ನಮ್ಮ ಅಹಂಕಾರದಲ್ಲಿ ಹಿಟ್ಲರ್ ಇದ್ದಾನೆ. ನಮ್ಮ ದುರಭಿಮಾನದಲ್ಲಿ. ಯಾವುದೇ ಕ್ಷಣವನ್ನು ಗಲಭೆಯಾಗಿಸಿ, ರಕ್ತಪಾತವಾಗಿಸಿ ವಿಜ್ರಂಭಿಸಲು ಕಾದ ಹಿಟ್ಲರನಿದ್ದಾನೆ. ಬಹುಶ: ನಮ್ಮೊಳಗೇ ಅವನ ಸಂಹಾರವಾಗಬೇಕಿದೆ ನಮ್ಮೊಳಗೇ....

( ನೇಮಿಚಂದ್ರರವರ ಇತ್ತೀಚೆಗೆ ಬಿಡುಗಡೆಯಾದ ಯಾದ್ ವಶೇಮ್ ಕಾದಂಬರಿಯ ಕೆಲವು ಆಯ್ದ ವಾಕ್ಯಗಳು)

ನನ್ನ ನೆಚ್ಚಿನ ಬರಹಗಾರ್ತಿ ಸಿಕ್ಕಾಗ...

ಕಳೆದ ತಿಂಗಳು ನನಗೆ ನೇಮಿಚಂದ್ರರವರ ಯಾದ್ ವಶೇಮ್ ಪುಸ್ತಕ ಬಿಡುಗಡೆ ಸಮಾರಂಭದ ಆಮಂತ್ರಣ ಬಂದಿತ್ತು. ನನ್ನ ನೆಚ್ಚಿನ ಬರಹಗಾರ್ತಿಯಿಂದ ಆಮಂತ್ರಣ ಬಂದಿದ್ದರಿಂದ ಉಬ್ಬಿಹೋಗಿದ್ದೆ.
ಗಾಂಧಿ ಜಯಂತಿ ದಿನದಂದು ನನ್ನ ಇನ್ನಿಬ್ಬರು ಗೆಳತಿಯರ ಜೊತೆಗೂಡಿ ಕನ್ನಡ ಭವನಕ್ಕೆ ಹೋದೆ.
ನನಗ್ಯಾಕೋ ಅನುಮಾನ ನನ್ನನ್ನು ನಿಜಕ್ಕೂ ನೇಮಿಚಂದ್ರನೇ ಅಮಂತ್ರಿಸಿದ್ದಾ? ಅವರ ಕಾದಂಬರಿ ಬಿಡುಗಡೆ ಇವತ್ತೇನಾ? ಒಂದು ವೇಳೆ ಸಮಾರಂಭ ಇಲ್ಲದಿದ್ದರೆ ನೇಮಿಚಂದ್ರರನ್ನು ಕಣ್ತುಂಬ ನೋಡುವ ಭಾಗ್ಯನೂ ತಪ್ಪುತ್ತೆ. ಮನದಲ್ಲಿ ಹಲವು ಗೊಂದಲ ಕಂಡುಬಂದರೂ ಕನ್ನಡ ಭವನದೊಳಗೆ ಅಡಿ ಇಟ್ಟಾಗ ಮನದಲ್ಲಿ ಸಂತಸ. ಅದು ನಿಜಕ್ಕೂ ನೇಮಿಯವರ ಪುಸ್ತಕ ಬಿಡುಗಡೆ ಸಮಾರಂಭ. ಒಂದಷ್ಟು ರೋಮಂಚನ, ಖುಷಿ, ಪುಳಕ. ವೇದಿಕೆಯಲ್ಲಿ ನೇಮಿ ಜತೆಗೆ ಇತರೆ ಬರಹಗಾರರೂ ಇದ್ರು. ಅವರೆಲ್ಲರ ನಡುವೆ ಚೂಡಿದಾರ ಹಾಕಿ ಮಿಂಚುತ್ತಿದ್ದರು ನೇಮಿಚಂದ್ರ.
ನನಗಂತೂ ತುಂಬಾ ಸಂತಸವಾಗಿತ್ತು. ಕಣ್ ಕಣ್ ಬಿಟ್ಟು ಅವರನ್ನೇ ನೋಡುತ್ತಿದ್ದೆ. ಅದೆಂಥಹ ವಿನಯ. ಅಲ್ಲಿಗೆ ಆಗಮಿಸಿದ ಎಲ್ಲರಲ್ಲೂ ವಿನಯ ದೈನ್ಯತೆಯಿಂದ ವರ್ತಿಸುತ್ತಿದ್ದರು. ಹಿರಿಯ ಬರಹಗಾರರಿಂದ ಕೈ ಮುಗಿದು ಆಶೀರ್ವಾದ ಕೇಳುತ್ತಿದ್ದರು. ನಾನು ಅವರ ಪ್ರತಿ ಚಲನ ವಲನಗಳನ್ನು ನೋಡಿ ಭಾವುಕಳಾಗಿದ್ದೆ. ಸಭೆಯಲ್ಲಿ ಅವರು ಕಾದಂಬರಿ ಕುರಿತಾಗಿ ಮಾತನಾಡಿದ್ದರು. ಇವರ ಬರಹ ಮಾತ್ರವಲ್ಲ. ಮಾತುಗಳೂ ಕೇಳಲು ತುಂಬಾ ಹಿತಕರವಾಗಿದ್ದವು. ಅವರು ಅವರಮ್ಮನ ಬಗ್ಗೆ ಅಭಿಮಾನದಿಂದ ಹೇಳುವಾಗ ನನಗರಿವಿಲ್ಲದಂತೆ ಕಣ್ಣಲ್ಲಿ ನೀರು ಇಳಿದಿದ್ದು.
ನನ್ನ ಮಮ್ಮಿನೂ ಅವರಮ್ಮನಂತೆ ಗ್ರೇಟ್. ನಾನು ಬಯಸಿದ ಬಯಸದ ಎಲ್ಲವನ್ನೂ ನಮಗೆ ನೀಡಿ ಪ್ರೋತ್ಸಾಹಿಸಿದರು.
ಕಾರ್ಯಕ್ರಮ ಮುಕ್ತಾಯವಾದೊಡನೆ ಗೆಳತಿಯರನ್ನು ಬಿಟ್ಟು ನಾನೊಬ್ಬಳೇ ನೇಮಿಚಂದ್ರರಲ್ಲಿಗೆ ಹೋಗಿ ನನ್ನ ಹೆಸರು ವೀಣಾ ಡಿ’ಸೋಜಾ ಎಂದೆ. ಅವರು ಅಷ್ಟೇ ಹರ್ಷದಲ್ಲಿ ‘ಓ ವೀಣಾ... ಇ-ಮೇಲ್ ಫ್ರೆಂಡ್’ ಅಂದರು. ಅ ಕ್ಷಣ ನನ್ನನ್ನೇ ನಾ ಮರೆತೆ. ಹಾಗಿದ್ರೆ ನಾನು ಮೇಲ್ ಮಾಡಿದ್ದು ನನಗೆ ಮೇಲ್ ಬರುತ್ತಿದ್ದದು ನೇಮಿಚಂದ್ರರಿಂದಲೇ. ವ್ಹಾ! ಐ ಆಮ್ ರಿಯಲಿ ಲಕ್ಕಿ. ಮೇಡಂ ನನ್ನ ಗೆಳತಿಯರು ಹೊರಗೆ ಇದ್ದಾರೆ. ನಿಮ್ಮನ್ನು ಭೇಟಿ ಮಾಡಿಸಬೇಕು ಎಂದೆ. ಖಂಡಿತಾ ಬರುತ್ತೇನೆ ಎಂದೇಳಿ ನಮ್ಮ ಜೊತೆ ಒಂದಷ್ಟು ಹೊತ್ತು ಮಾತನಾಡಿದ್ದರು.
‘ಇಷ್ಟು ಚಿಕ್ಕ ವಯಸ್ಸಿನಲ್ಲಿ ಉದ್ಯೋಗದಲ್ಲಿದ್ದಿರಾ’ ಎಂದು ಆಶ್ಚರ್ಯದಿಂದ ಕೇಳಿದರು. ನಾವು ಸ್ನಾತಕೋತ್ತರ ಪದವಿ ಮುಗಿಸಿ ಬಂದವರೆಂದು ಹೇಳಿದ್ರೆ ಅವರಿಗೆ ನಂಬೋಕೇ ಕಷ್ಟವಾಗಿತ್ತು. ವಾಹನವೊಂದು ಅವರಿಗಾಗಿ ಕಾದಿತ್ತು. ಅದ್ರೂ ಅಟೋಗ್ರಾಫ್ ಕೊಡಲು ಹಿಂಜರಿಯಲಿಲ್ಲ.

ನನ್ನ ಪ್ರಕಾರ 'ಅಮ್ಮಚ್ಚಿಯೆಂಬ ನೆನಪು'

'ಅಮ್ಮಚ್ಚಿಯೆಂಬ ನೆನಪು' ಸಿನಿಮಾ ಇತ್ತೀಚಿಗೆ ನೋಡಿದೆ. ನಮ್ಮ ಸುತ್ತಮುತ್ತಲಿರುವ ಸಾವಿರಾರು ಮಹಿಳೆಯರ ಕೌಟಿಂಬಿಕ  ಹೋರಾಟದ ವಾಸ್ತವಿಕ ಕಥೆಯಿದು. ಪ್ರತಿಯೋರ್ವ ...